MSCHS Nirchal: MAHAJANA

MSCHS Nirchal: MAHAJANA


ರಕ್ಷಕರ ಸಮ್ಮೇಳನ 2014

Posted: 14 Nov 2014 01:37 AM PST


"ವಿದ್ಯಾರ್ಥಿಗಳ ಪ್ರಗತಿಗೆ ರಕ್ಷಕರು ಮತ್ತು ಶಿಕ್ಷಕರ ಹೊಂದಾಣಿಕೆ ಅಗತ್ಯ. ಸೌಹಾರ್ದಯುತ ವಾತಾವರಣವಿರುವ ಮನೆಗಳಲ್ಲಿ ಬೆಳೆದ ಮಕ್ಕಳು ಉತ್ತಮ ನಾಗರಿಕರಾಗಿ ಬೆಳಗುತ್ತಾರೆ. ಆ ರೀತಿಯ ಸುಸಂಸ್ಕೃತ ವಾತಾವರಣವಿರುವ ಮನೆ ಮನಗಳನ್ನು ರೂಪಿಸಲು ನಾವು ಪ್ರಯತ್ನಿಸಬೇಕು ಎಂದು ನಮ್ಮ ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಾಂಗೋಳಿ ಅಭಿಪ್ರಾಯಪಟ್ಟರು. ಅವರು ಸರ್ವಶಿಕ್ಷಾ ಅಭಿಯಾನದ ಅಂಗವಾಗಿ ಇಂದು ನಮ್ಮ ಶಾಲೆಯಲ್ಲಿ ಜರಗಿದ ರಕ್ಷಕರ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಹಿರಿಯ  ಶಿಕ್ಷಕಿ ಎ.ಭುವನೇಶ್ವರಿಯವರು ಮಕ್ಕಳಲ್ಲಿ ವಿನಯ ವಿಧೇಯತೆಗಳನ್ನು ಬೆಳೆಸುವಲ್ಲಿ ಮಾತೆಯರ ಪಾತ್ರವು ಮಹತ್ತರವಾದುದು. ಎಲ್ಲ ಮಾತೆಯರು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು. ಶಾಲಾ ಮುಖ್ಯೋಪಾಧ್ಯಾಯ ಎಚ್.ಸೂರ್ಯನಾರಾಯಣ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಶೈಲಜಾ.ಎ ಮತ್ತು ವೇಣುಗೋಪಾಲಕೃಷ್ಣ.ಇ ರಕ್ಷಕರಿಗೆ ತರಗತಿ ನಡೆಸಿಕೊಟ್ಟರು. ಹಿರಿಯ ಶಿಕ್ಷಕಿ ಮೀನಾಕ್ಷಿ.ಎಚ್.ಎನ್ ಸ್ವಾಗತಿಸಿ ಮಾಲತಿ.ಪಿ ವಂದಿಸಿದರು. ಈ ಸಂದರ್ಭದಲ್ಲಿ ಬದಿಯಡ್ಕ ಗ್ರಾಮ ಪಂಚಾಯತು ಬಿಡುಗಡೆಗೊಳಿಸಿದ ಡೈರಿಯನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಅಧ್ಯಾಪಕ ಹುದ್ದೆಗೆ ಸಂದರ್ಶನ

Posted: 13 Nov 2014 04:20 AM PST


ನಮ್ಮ ಶಾಲೆಯ ಪ್ರೌಢಶಾಲಾ ವಿಭಾಗದ ನ್ಯಾಚುರಲ್ ಸಯನ್ಸ್(ವಿಜ್ಞಾನ ಪದವಿ, ಬಿ.ಎಡ್) ಮತ್ತು ಹೈಯರ್ ಸೆಕೆಂಡರಿ ವಿಭಾಗದ ರಸಾಯನ ಶಾಸ್ತ್ರ (ರಸಾಯನ ಶಾಸ್ತ್ರ ಸ್ನಾತಕೋತ್ತರ ಪದವಿ, ಬಿ.ಎಡ್ ಮತ್ತು ಸೆಟ್ ಅಥವಾ ನೆಟ್) ಶಿಕ್ಷಕರ ಆಯ್ಕೆಗಾಗಿ 17.11.2014 ಸೋಮವಾರ ಬೆಳಗ್ಗೆ 10.30ಕ್ಕೆ ಶಾಲೆಯಲ್ಲಿ ಸಂದರ್ಶನ ನಡೆಸಲಾಗುವುದು. ಅರ್ಹ ಅಭ್ಯರ್ಥಿಗಳು ಸಕಾಲದಲ್ಲಿ ಹಾಜರಿರಬೇಕಾಗಿ ವಿನಂತಿ. ಹೆಚ್ಚಿನ ವಿವರಗಳಿಗಾಗಿ ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ (9446283131, 9846575909) ಇವರನ್ನು ಸಂಪರ್ಕಿಸಬಹುದು.

No comments:

Post a Comment

Previous Page Next Page Home