MSCHS Nirchal: MAHAJANA

MSCHS Nirchal: MAHAJANA


ವಿದಾಯ ಸಮಾರಂಭ

Posted: 30 Jun 2015 07:16 AM PDT


"ನಿವೃತ್ತ ಜೀವನದಲ್ಲಿ ಸಾಮಾಜಿಕ ಚಟುವಟಿಕೆಗಳ ಕಡೆಗೆ ಸಕ್ರಿಯರಾಗಿರಬೇಕಾದ ಕಾಲ. ಸಮಾಜಕ್ಕೆ ನಿವೃತ್ತರಿಂದ ಇನ್ನಷ್ಟು ಕೊಡುಗೆಗಳು ದೊರೆಯಬೇಕಾಗಿದೆ. ನಿಸ್ವಾರ್ಥರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಈ ಇಬ್ಬರು ಅಧ್ಯಾಪಕರು ಶಾಲೆಯ ಕ್ರೀಡಾ ಚಟುವಟಿಕೆಗಳಲ್ಲಿ, ಸಾಂಸ್ಕೃತಿಕ ಹಿನ್ನೆಲೆಗಳಲ್ಲಿ ದುಡಿದು ಯುವಕರಿಗೆ ಮಾರ್ಗದರ್ಶಿಯಾಗಿದ್ದಾರೆ. ಭವಿಷ್ಯದಲ್ಲಿ ನೈಜ ಜೀವನವನ್ನು ಪೂರೈಸಲು ಭಗವಂತನು ಅವರನ್ನು ಹರಸಲಿ" ಎಂದು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ಜರಗಿದ ಶಾಲಾ ಮುಖ್ಯೋಪಾಧ್ಯಾಯ ಕೆ.ಶಂಕರನಾರಾಯಣ ಶರ್ಮ ಮತ್ತು ಹಿರಿಯ ಶಿಕ್ಷಕ ಕೆ.ನಾರಾಯಣ ಭಟ್ ಇವರ ಬೀಳ್ಕೊಡುಗೆ ಸಮಾರಂಭದಲ್ಲಿ ನಿವೃತ್ತರನ್ನು ಸನ್ಮಾನಿಸಿ ಮಾತನಾಡುತ್ತಿದ್ದರು.

ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಎಚ್.ಎನ್.ಮೀನಾಕ್ಷಿ ಉಪಸ್ಥಿತರಿದ್ದರು. ನಮ್ಮ ಶಾಲೆಯ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಸ್ವಾಗತಿಸಿದರು. ಶಾಲಾ ಹಿರಿಯ ಶಿಕ್ಷಕಿ ಕೆ.ವಿನೋದಿನಿ ವಂದಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಎಂ.ಸೂರ್ಯನಾರಾಯಣ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment

Previous Page Next Page Home