MSCHS Nirchal: MAHAJANA

MSCHS Nirchal: MAHAJANA


“ಚಟುವಟಿಕೆ ಆಧಾರಿತ ಕಲಿಕೆ ಅಗತ್ಯ” : ಮೈರ್ಕಳ ನಾರಾಯಣ ಭಟ್

Posted: 03 Feb 2016 03:04 AM PST


"ತಲೆಮಾರುಗಳ ಹಿಂದಿನಿಂದಲೇ ಗುಣಮಟ್ಟದ ಶಿಕ್ಷಣವನ್ನು ನೀಡಿ ನಾಡಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮಹಾಜನ ಸಂಸ್ಥೆ ಮತ್ತೊಂದು ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಒಂದು ಕಾಲದಲ್ಲಿ ಸಂಸ್ಕೃತ ಮಹಾವಿದ್ಯಾಲಯವಾಗಿದ್ದ ಈ ಸಂಸ್ಥೆಯಲ್ಲಿ ಸುಸಜ್ಜಿತ ಗ್ರಂಥಾಲಯವಿದ್ದು ಇದರ ಉಪಯೋಗವನ್ನು ಅನೇಕ ಮಂದಿ ಪಡೆದುಕೊಳ್ಳುತ್ತಿದ್ದಾರೆ. ಚಟುವಟಿಕೆ ಆಧಾರಿತ ಕಲಿಕೆಯು ಪ್ರಸಕ್ತ ಕಾಲಘಟ್ಟದ ಅಗತ್ಯವಾಗಿರುವುದರಿಂದ ಈ ಸಂಸ್ಥೆಯಲ್ಲಿ ಅಂತಹ ಚಟುವಟಿಕೆಗಳಿಗೂ ವಿಶಾಲ ಅವಕಾಶಗಳು ದೊರೆಯುತ್ತಿರುವುದು ಸಂತಸದ ವಿಚಾರ" ಎಂದು ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯ ನಿವೃತ್ತ ಪ್ರಾಂಶುಪಾಲ ಮೈರ್ಕಳ ನಾರಾಯಣ ಭಟ್ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಹೈಯರ್ ಸೆಕೆಂಡರಿ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಜರಗಿದ ವರ್ಧಂತ್ಯುತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಡಿ.ಶಂಕರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಾಂಗೋಳಿ ಮತ್ತು ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಜಯಾ.ಎಸ್ ಭಟ್ ಶುಭಹಾರೈಸಿದರು.

ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ವೆಂಕಟರಾಜ.ಸಿ.ಎಚ್ ವರದಿ ವಾಚಿಸಿದರು. ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಎಚ್.ಎನ್.ಮೀನಾಕ್ಷಿ ವಂದಿಸಿದರು. ಶಾಲಾ ಶಿಕ್ಷಕಿ ಶ್ರೀದೇವಿ.ಕೆ ಕಾರ್ಯಕ್ರಮವನ್ನು ನಿರೂಪಿಸಿದರು.

GHS KALICHANADUKKAM

GHS KALICHANADUKKAM


ജൈവ പച്ചക്കറി കൃഷി വിളവെടുപ്പിലേയ്ക്ക് കാലിച്ചാനടുക്കം

Posted: 02 Feb 2016 09:59 AM PST


Cheruvathur 12064

Cheruvathur 12064


നഞ്ചില്ലാത്ത ഊണിന് പപ്പായ

Posted: 02 Feb 2016 01:20 AM PST

നഞ്ചില്ലാത്ത ഊണിന് പപ്പായ

ജില്ലാകലോത്സവ നഗരിയിലേക്ക് കുട്ടികളില്‍ നിന്നും ശേഖരിച്ച പപ്പായ മാതൃഭൂമിക്ക് കൈമാറുന്നു.




പരിസര ശുചീകരണം

Posted: 02 Feb 2016 01:02 AM PST

പരിസര ശുചീകരണം

സീഡ് ക്ലബ്ബിന്റെ കുട്ടികള്‍ സ്കൂളും പരിസരവും വൃത്തിയാക്കുന്നതിന് നേതൃത്വം നല്‍കുന്നു.





Previous Page Next Page Home