MSCHS Nirchal: MAHAJANA

MSCHS Nirchal: MAHAJANA


ಕಲೋತ್ಸವ ಸಂಘಟನಾ ಸಮಿತಿ ರೂಪೀಕರಣ ಸಭೆ

Posted: 17 Aug 2017 01:28 AM PDT

ಈ ಅಧ್ಯಯನ ವರ್ಷದ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವವನ್ನು ನಮ್ಮ ಶಾಲೆಯಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಈ ನಿಟ್ಟಿನಲ್ಲಿ ಸಂಘಟನಾ ಸಮಿತಿ ರೂಪೀಕರಣ ಸಭೆಯನ್ನು ಅಗೋಸ್ತು 23 ರಂದು ಅಪರಾಹ್ನ 3.15ಕ್ಕೆ ಕರೆಯಲಾಗಿದೆ. ಕುಂಬಳೆ ಉಪಜಿಲ್ಲೆಯ ವ್ಯಾಪ್ತಿಗೊಳಪಡುವ ಕೇರಳ ಸರಕಾರದ ಎಲ್ಲ ಅಂಗೀಕೃತ ಶಾಲೆಗಳ ಅಧಿಕೃತರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸೂಕ್ತ ಸಲಹೆಗಳನ್ನು ನೀಡಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಾಗಿ ಅಪೇಕ್ಷೆ.

ಸ್ವಾತಂತ್ರ್ಯ ದಿನಾಚರಣೆ

Posted: 17 Aug 2017 12:11 AM PDT


ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಇಂದು ನಮ್ಮ ಹೈಯರ್ ಸೆಕೆಂಡರಿ ಮತ್ತು ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ನೀರ್ಚಾಲು ಪೇಟೆಯಲ್ಲಿ ಸ್ವಾತಂತ್ರ್ಯ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಸ್.ನಾರಾಯಣ ಮಾತನಾಡಿದರು.

ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ, ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಉದಯ ಕಂಬಾರು, ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಎಚ್.ಎನ್.ಮೀನಾಕ್ಷಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಸ್ವಾಗತಿಸಿದರು.  ಶಾಲಾ ಹಿರಿಯ ಶಿಕ್ಷಕಿ ಕೆ.ವಿನೋದಿನಿ ವಂದಿಸಿದರು. ಸಂಚಾಲಕ ಚಂದ್ರಶೇಖರ ರೈ ಕಾರ್ಯಕ್ರಮ ನಿರೂಪಿಸಿದರು.

ಹಾಯ್... ಕುಟ್ಟಿಕೂಟಂ

Posted: 17 Aug 2017 12:29 AM PDT


ಎಂಟನೇ ತರಗತಿಯ ಆಯ್ದ ವಿದ್ಯಾರ್ಥಿಗಳನ್ನು ಕಂಪ್ಯೂಟರ್ ತಜ್ಞರಾಗಿ ಬೆಳೆಸುವ ಯೋಜನೆಯನ್ನು ನಮ್ಮ ಶಿಕ್ಷಣ ಇಲಾಖೆ ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ IT@School ಸಂಸ್ಥೆಯು ವಿದ್ಯಾರ್ಥಿಗಳಿಗಾಗಿ Hi...Kuttikootam ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ನಮ್ಮ ಶಾಲೆಯಿಂದ ಆಯ್ದ 20 ಮಂದಿ ವಿದ್ಯಾರ್ಥಿಗಳಿಗೆ ಈ ಮೂಲಕ ಕಂಪ್ಯೂಟರ್ ಹಾರ್ಡ್‍ವೇರ್, ಎನಿಮೇಶನ್, ಇಲೆಕ್ಟ್ರೋನಿಕ್ಸ್, ಮಾತೃಭಾಷೆಯಲ್ಲಿ ಟೈಪಿಂಗ್ ಮತ್ತು ಕಂಪ್ಯೂಟರ್ ಸುರಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲಾಗುವುದು.

ಈ ಕಾರ್ಯಕ್ರಮವನ್ನು ಇಂದು ಅಪರಾಹ್ನ 4 ಗಂಟೆಗೆ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪಕರಾದ ಜಯದೇವ ಖಂಡಿಗೆ ಉದ್ಘಾಟಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಾಂಗೋಳಿ ಸಭೆಯ ಅಧ್ಯಕ್ಷತೆ ವಹಿಸಿದರು. ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಶುಭಾಶಯಗಳನ್ನು ಹೇಳಿದರು. ಸಂಪನ್ಮೂಲ ವ್ಯಕ್ತಿಗಳಾದ ರವಿಶಂಕರ ಸ್ವಾಗತಿಸಿ, ವಿಶ್ವನಾಥ ಭಟ್ ವಂದಿಸಿದರು.

No comments:

Post a Comment

Previous Page Next Page Home