MSCHS Nirchal: MAHAJANA

MSCHS Nirchal: MAHAJANA


ನೆರೆ ಸಂತ್ರಸ್ತರಿಗೆ ದೇಣಿಗೆ ಸಂಗ್ರಹ

Posted: 20 Aug 2018 12:14 AM PDT


ಕೇರಳದ ಪ್ರವಾಹ ಸಂತ್ರಸ್ತರಿಗೆ ನೀಡಲು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳು ಸಂಗ್ರಹಿಸಿದ ಮೊತ್ತವನ್ನು ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್. ವೆಂಕಟರಾಜ ಸ್ವೀಕರಿಸಿದರು.

ಈ ಮೊತ್ತದಿಂದ ಖರೀದಿಸಲಾದ 50 ಕಿಲೋಗ್ರಾಂ ಅಕ್ಕಿ, 10 ಕಿಲೋಗ್ರಾಂ ಅವಲಕ್ಕಿ, 10 ಕಿಲೋಗ್ರಾಂ ಸಜ್ಜಿಗೆ,10 ಕಿಲೋಗ್ರಾಂ ಹಸರು ಬೇಳೆ, 15 ಕಿಲೋಗ್ರಾಂ ಸಕ್ಕರೆ, 10 ಕಿಲೋಗ್ರಾಂ ಕಡಲೆ, 10 ಕಿಲೋಗ್ರಾಂ ತೊಗರಿ ಬೇಳೆ, 4 ಕಿಲೋಗ್ರಾಂ ಚಾಹುಡಿ, 5 ಟೂಥ್ ಪೇಸ್ಟ್, ಇವುಗಳನ್ನು ಸ್ಕೌಟ್ ಗೈಡ್ ಜಿಲ್ಲಾ ಸಮಿತಿಯ ಮೂಲಕ ನೆರೆ ಸಂತ್ರಸ್ತರಿಗೆ ಕಳುಹಿಸಿಕೊಡಲಾಯಿತು. ನಮ್ಮ ಜೊತೆ ಕೈಜೋಡಿಸಿದವರಿಗೆ ಕೃತಜ್ಞತೆಗಳು...
Previous Page Next Page Home